ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2025-26
ಶಿರಸಿಯ ಶ್ರೀ ಮಾರಿಕಾಂಬ ಸರಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ 2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆದಿತ್ತು. ಹಿರಿಯ ಪ್ರಾಥಮಿಕ ವಿಭಾಗದ ಆಶು ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ಕು. ತೇಜಸ್ವಿ ರಾಮಚಂದ್ರ ಹೆಗಡೆ ಪ್ರಥಮ ಸ್ಥಾನ ಪಡೆದು ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ. ಕಳೆದ ವರ್ಷವೂ ತೇಜಸ್ವಿ ದ್ವಿತೀಯ ಸ್ಥಾನ ಪಡೆದಿರುವುದನ್ನು ಇಲ್ಲಿ ಸ್ಮರಿಸಬಹುದು.

ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಮ್.ಸಿ. ಸಮಿತಿ, ಪಾಲಕ ಪೋಷಕರು ಹಾಗೂ ಹಾವಿನಬೀಳು ಗ್ರಾಮಸ್ಥರು ಅಪಾರ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

* * * * * * *
